ರಾಜ್ಯ

ಕರೋನ ಟೆಸ್ಟ್ ಮಾಡಿಸಿದವರಿಗೆ ₹500 ಪ್ರೋತ್ಸಾಹಧನ.!

ಕೊಪ್ಪಳ : ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಕೇಸರಹಟ್ಟಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕೊರೋನಾ ಟೆಸ್ಟ್ ಮಾಡಿಸಿಕೊಂಡವರಿಗೆ ₹500 ಪ್ರೋತ್ಸಾಹಧನ ನೀಡುವುದಾಗಿ ಗ್ರಾ.ಪಂ. ಅಧ್ಯಕ್ಷ ಬಸವರಾಜ ಘೋಷಿಸಿದ್ದಾರಂತೆ.

ಹೌದು, ಗ್ರಾ.ಪಂ. ಅಧ್ಯಕ್ಷ ಬಸವರಾಜ ಅವರು ಕೊರೋನಾ ಟೆಸ್ಟ್ ಮಾಡಿಸಿಕೊಂಡವರಿಗೆ ₹500 ಪ್ರೋತ್ಸಾಹಧನ ನೀಡುವುದಾಗಿ ಹಾಗು ಮನೆ ಮನೆಗಳಿಗೆ ತೆರಳಿ ಕೋವಿಡ್ ಟೆಸ್ಟ್ ಮಾಡಿಸುವಂತೆ ಮನವಿ ಮಾಡುತ್ತಿದ್ದು, ಜನರಿಗೆ ಒಂದು ದಿನದ ಕೂಲಿ ನೀಡುವ ಭರವಸೆ ನೀಡುತ್ತಿದ್ದಾರೆ.

ಇನ್ನು, ಕೊರೋನಾ ಸೋಂಕು ಹಳ್ಳಿಗಳಲ್ಲಿ ವ್ಯಾಪಕವಾಗಿ ಹರಡುತ್ತಿದ್ದು, ಹೀಗಾಗಿ ಪ್ರತಿ ಗ್ರಾಮಗಳಲ್ಲೂ ಕೋವಿಡ್ ಟೆಸ್ಟ್ ಕಡ್ಡಾಯಗೊಳಿಸಲಾಗಿದೆ.

Leave a Reply

Your email address will not be published. Required fields are marked *

Back to top button

Adblock Detected

Please consider supporting us by disabling your ad blocker