ಕರಾವಳಿ

ಡಾll ವಿ.ಎಸ್. ಆಚಾರ್ಯ ಮನೆಗೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಭೇಟಿ…!

ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವರಾದ ಶೋಭಾ ಅವರೊಂದಿಗೆ ಶಾಸಕರಾದ ಶ್ರೀ ಕೆ. ರಘುಪತಿ ಭಟ್ ರವರು ಕೀರ್ತಿಶೇಷ ಡಾll ವಿ.ಎಸ್. ಆಚಾರ್ಯ ಅವರ ಮನೆಗೆ ಇಂದು ದಿನಾಂಕ 19-08-2021 ರಂದು ಭೇಟಿ ನೀಡಿ ಅವರ ಧರ್ಮಪತ್ನಿ ಶಾಂತಾ ವಿ. ಆಚಾರ್ಯ ಅವರ ಕ್ಷೇಮಾರೋಗ್ಯವನ್ನು ವಿಚಾರಿಸಿದರು.

ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯರಾದ ತುಳಸಿ ಮುನಿರಾಜು, ಬಿಜೆಪಿ ಜಿಲ್ಲಾಧ್ಯಕ್ಷರಾದ ಕುಯಿಲಾಡಿ ಸುರೇಶ್ ನಾಯಕ್, ಉಪಾಧ್ಯಕ್ಷರಾದ ಶ್ರೀಶ ನಾಯಕ್, ರಾಜ್ಯ ಎಸ್.ಸಿ ಮೋರ್ಚಾ ಪ್ರಧಾನ ಕಾರ್ಯದರ್ಶಿ ದಿನಕರ್ ಬಾಬು, ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷರಾದ ವೀಣಾ ಶೆಟ್ಟಿ ಹಾಗೂ ಪ್ರಮುಖರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

Back to top button

Adblock Detected

Please consider supporting us by disabling your ad blocker