ಕರಾವಳಿ

ಬ್ರಹ್ಮಾವರ : ಮದ್ಯ ಸೇವನೆಗೆ ಸ್ನೇಹಿತನನ್ನು ಕರೆಸಿ ಸ್ನೇಹಿತನ ಮೇಲೆ ಹಲ್ಲೆ ..!

ಬ್ರಹ್ಮಾವರ : ಸ್ನೇಹಿತನೋರ್ವನನ್ನು ಮದ್ಯ ಸೇವನೆಗಾಗಿ ಬಾರ್‌ಗೆ ಕರೆಯಿಸಿ, ಮದ್ಯ ಸೇವಿಸಿದ ನಂತರದಲ್ಲಿ ಸ್ನೇಹಿತರ ಮೇಲೆಯೇ ಹಲ್ಲೆ ನಡೆಸಿರುವ ಘಟನೆ ಉಡುಪಿ ಜಿಲ್ಲೆಯ ಬ್ರಹ್ಮಾವರದಲ್ಲಿ ನಡೆದಿದೆ.

ಹಲ್ಲೆಗೆ ಒಳಗಾಗಿರುವ ರಮೇಶ್‌ ಎಂಬವರು ಇದೀಗ ಬ್ರಹ್ಮಾವರ ಪೊಲೀಸರಿಗೆ ದೂರು ನೀಡಿದ್ದಾರೆ. ರಮೇಶ್‌ ಸ್ನೇಹಿತನಾಗಿರುವ ಪ್ರಶಾಂತ್‌ ಮದ್ಯ ಸೇವನೆ ಮಾಡಲು ಆಹ್ವಾನಿಸಿದ್ದಾನೆ. ನಂತರ ಪ್ರಶಾಂತ್‌ ಸ್ನೇಹಿತ ಶ್ರೀನಿವಾಸ ಸೇರಿದಂತೆ ಮೂವರು ಬ್ರಹ್ಮಾವರದ ಬಾರ್‌ವೊಂದಕ್ಕೆ ತೆರಳಿ ಮದ್ಯ ಸೇವನೆ ಮಾಡಿದ್ದಾರೆ.

ಆದರೆ ರಮೇಶ್‌ ಬಾರ್‌ ಬಿಲ್‌ ನೀಡಿಲ್ಲ ಅನ್ನೋ ಕಾರಣಕ್ಕೆ ಶ್ರೀನಿವಾಸ್‌ ಹಾಗೂ ಪ್ರಶಾಂತ್‌ ಸೇರಿಕೊಂಡು ಹಲ್ಲೆ ನಡೆಸಿದ್ದಾರೆ. ಅಲ್ಲದೇ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. ಹಲ್ಲೆಗೆ ಒಳಗಾಗಿರುವ ರಮೇಶ್‌ ಬ್ರಹ್ಮಾವರ ತಾಲೂಕು ಆಸ್ಪತ್ರೆಗೆ ದಾಖಲಾಗಿದ್ದು, ಹೆಚ್ಚಿನ ಚಿಕಿತ್ಸೆಗೆ ಉಡುಪಿಯ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ಇದೀಗ ಪ್ರಕರಣ ದಾಖಲು ಮಾಡಿಕೊಂಡಿರುವ ಬ್ರಹ್ಮಾವರ ಠಾಣೆಯ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

Leave a Reply

Your email address will not be published. Required fields are marked *

Back to top button

Adblock Detected

Please consider supporting us by disabling your ad blocker